ಕೂಡಲ ಸಂಗಮ ಅಭಿವೃದ್ಧಿ ಮಂಡಳಿ

    ಕಂದಾಯ ಇಲಾಖೆ, ಕರ್ನಾಟಕ ಸರಕಾರ

    ಶರಣರ ಬರುವೆಮಗೆ ಪ್ರಾಣ ಜೀವಾಳವಯ್ಯ

Vachana

ವಚನಗಳು

ಕೂಡಲ ಸಂಗಮ ಅಭಿವೃದ್ಧಿ ಮಂಡಳಿ


ದಯವಿಲ್ಲದ ಧರ್ಮವಾವುದಯ್ಯಾ ?
ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ
ದಯವೇ ಧರ್ಮದ ಮೂಲವಯ್ಯೂ
ಕೂಡಲಸಂಗಯ್ಯನಂತಲ್ಲದೊಲ್ಲನಯ್ಯೂ !!

 

 

ತನಗೆ ಮುನಿವವರಿಗೆ ತಾ ಮುನಿಯಲೇಕಯ್ಯಾ?
ತನಗಾದ ಆಗೇನು? ಅವರಿಗಾದ ಚೇಗೇನು?
ತನುವಿನ ಕೋಪ ತನ್ನ ಹಿರಿಯತನದ ಕೇಡು?
ಮನದಾ ಕೋಪ ತನ್ನರಿವಿನಾ ಕೇಡು
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ !!

 

 

ಅಡವಿಯಲೊಬ್ಬ ಕಡು ನೀರಡಿಸಿ,
ಎಡೆಯಲ್ಲಿ ನೀರ ಕಂಡಂತಾುತ್ತಯ್ಯಾ.
ಕುರುಡ ಕಣ್ಣ ಪಡೆದಂತೆ,
ಬಡವ ನಿಧಾನವ ಹಡೆದಂತಾುತ್ತಯ್ಯಾ.
ನಮ್ಮ ಕೂಡಲಸಂಗನ ಶರಣರ ಬರವೆನ್ನ ಪ್ರಾಣ ಕಂಡಯ್ಯಾ.

 

 

ಅಭ್ಯಾಸವೆನ್ನ ವರ್ತಿಸಿತ್ತಯ್ಯಾ, ಭಕ್ತಿ ಸಾಧ್ಯವಾಗದು,
ನಾನೇವೆನಯ್ಯಾ
ಅನು ನಿಮ್ಮ ಮನಂಬೊಗುವನ್ನಕ್ಕ ನೀವೆನ್ನ ಮನಂಬೊಗುವನ್ನಕ್ಕ
ಕಾಯಗುಣಂಗಳ ಕಳೆದವರಿಗೆ ಶರಣೆಂಬೆ
ಕೂಡಲಸಂಗಮದೇವಾ

 

 

ಅಂಧಕಾರವೆಂಬ ಗಹ್ವರದೊಳಗೆ ನಿದ್ರೆಯೆಂಬ ರಾಕ್ಷಸಿ ಗ್ರಹಿಸಿ,
ವೀರರ ನಿಗ್ರಹಿಸಿ ನೀರು ಮಾಡಿ, ದ್ಥೀರರ ಧೃತಿಗೆಡಿಸಿ,
ಶಾಪಾನುಗ್ರಹಸಮರ್ಥರ ಸತ್ತಂತಿರಿಸಿ,
ನಿಚ್ಚ ನಿಚ್ಚ ಜೀವನಾಶವ ಮಾಡುತ್ತಿಹಳು ನೋಡಾ,
ಕೂಡಲಸಂಗಮದೇವಾ

 

 

ಅಯ್ಯಾ, ನೀವೆನ್ನ ಬಲ್ಲಿರಲ್ಲದೆ ನಾ ನಿಮ್ಮ ಬಲ್ಲೆನೆ
ನಿಮ್ಮ ನಿಲವ ನೋಡಿಹೆನೆಂದಡೆ
ನಿಮ್ಮ ಘನವೆನ್ನ ಮನಕ್ಕೆ ಸಾಧ್ಯವಾಗದ ಕಾರಣ,
ಅಂತಿಂತೆಂದುಪಮಿಸಲಮ್ಮದೆ ಇದ್ದೆ ನೋಡಯ್ಯಾ,
ನಿತ್ಯತೃಪ್ತಮಹಿಮಾ, ನಿಮಗೆಂದಳವಡಿಸಿದ ಪದಾರ್ಥವ
ಸುಚಿತ್ತದಿಂದವಧರಿಸಿ ಸಲಹಯ್ಯಾ ಪ್ರಭುವೆ,
ಕೂಡಲಸಂಗಮದೇವಾ

 

 

ಅಷ್ಟಮಿ ನವಮಿ ಎಂಬ ಕಲ್ಪಿತವೇಕೋ ಶರಣಂಗೆ
ತಪ್ಪಿತ್ತು ಗಣಪದವಿ, ಲಿಂಗಕ್ಕೆ ದೂರ.
ಒಬ್ಬರಿಗಾಳಾಗಿ, ಒಬ್ಬರನೋಲೈಸುವ
ನಿರ್ಬುದ್ಧಿಮನುಜರನೇನೆಂಬೆ,
ಕೂಡಲಸಂಗಮದೇವಾ !

 

 

ಅಂಕ ಕಳನೇರಿ ಕೈಮರೆದಿರ್ದಡೆ
ಮಾರಂಕ ಬಂದಿರಿವುದ ಮಾಬನೆ
ನಿಮ್ಮ ನೆನಹ ಮನ ಮರೆದಿರ್ದಡೆ
ಮಾಯೆ ತನುವನಂಡಲೆವುದ ಮಾಬುದೆ
ಕೂಡಲಸಂಗಯ್ಯನ ನೆನೆದಡೆ,
ಪಾಪ ಉರಿಗೊಡ್ಡಿದರಗಿನಂತೆ ಕರಗುವುದಯ್ಯಾ

 

 

ಅಂಗದಲ್ಲಿ ಅರ್ಪಿತವಾದ ಸುಖವು
ಲಿಂಗದಲ್ಲಿ ಲೀಯವಾಯಿತ್ತೆಂದಡೆ
ಅಂಗವ ಲಿಂಗದಲ್ಲಿ ಮತ್ತೆ ನಿಕ್ಷೇಪಿಸಿಹೆನೆಂಬ
ಕಾರಣವೇಕಯ್ಯಾ ಶರಣಂಗೆ
ಪ್ರಾಣನ ಲಿಂಗದಲ್ಲಿ ಸವೆಸಿ ನಿರವಯವಾಗಬಹುದಲ್ಲದೆ
ಕರ್ಮದಿಂದಾದ ಕಾಯವ ಸವೆಸಿ ಸಯವಪ್ಪ ಪರಿ ಎಂತು ಹೇಳಯ್ಯಾ
ಕೂಡಲಸಂಗಮದೇವಾ,
ನಿಮ್ಮ ಶರಣರು ಕಾಯವಿಡಿದಿರ್ದು ನಿರ್ಮಾಯವಾಗಿರ್ಪುದ
ಹೇಳಯ್ಯಾ ನಿಮ್ಮ ಧರ್ಮ

 

 

ಅರ್ಪಿತವೆಂಬೆನೆ
ದೇವರೊಂದಿಲ್ಲವಾಗಿ, ಅರ್ಪಿಸುವ ಭಕ್ತ ಮುನ್ನವೆ ಇಲ್ಲ.
ಅರ್ಪಿತ ಅನರ್ಪಿತ ನೀನೆ ಎಂಬೆ,
ಕೂಡಲಸಂಗಮದೇವಾ

 

 

ಅಡಿಗಡಿಗೆ ದೇವರಾಣೆ, ಅಡಿಗಡಿಗೆ ಭಕ್ತರಾಣೆ,
ಅಡಿಗಡಿಗೆ ಗುರುವಿನಾಣೆ ಎಂಬ ವಚನವೆ ಹೊಲ್ಲ !
ಮುಂದೆ ಪಥಕ್ಕೆ ಸಲ್ಲರು.
ಆದಿಯಿಂದ ಬಂದ ವಚನವೆಂದು ಶರಣರ ಕೂಡೆ ಸರಸವಾಡಿದಡೆ,
ನಗುತಲಿರಿದುಕೊಂಡಡೆ ಅಲಗು ನೆಡದಿಹುದೆ
ಕೂಡಲಸಂಗಮದೇವಾ

 

 

ಅಮೃತಮತಿ ಸೋಮಶಂಭುವಿಂಗೆ ಹುಟ್ಟಿದಾತನಿಂದ್ರ
ಸತ್ಯಋಷಿ ಜೇಷ್ಠಾದೇವಿಗೆ ಹುಟ್ಟಿದಾತ ಬ್ರಹ್ಮ.
ವಸುದೇವ ದೇವಕಿಗೆ ಹುಟ್ಟಿದಾತ ವಿಷ್ಣು.
ನಾಭಿರಾಜ ಮರುತಾದೇವಿಗೆ ಹುಟ್ಟಿದಾತನರುಹ
ಇವರೆಲ್ಲರು ಯೋನಿಜರೆಂಬುದ ತ್ರೈಜಗ ಬಲ್ಲುದು.
ಉತ್ಪತ್ತಿ ಸ್ಥಿತಿ ಪ್ರಳಯಕ್ಕೆ ಹೊರಗಾದ ಕೂಡಲಸಂಗಮದೇವಂಗೆ
ಮಾತಾಪಿತರುಗಳುಳ್ಳಡೆ ಹೇಳಿರೊ !

 

 

ಅಡವಿಯೊಳಗೆ ಹೊಲಬುಗೆಟ್ಟ ಪಶುವಿನಂತೆ
ಅಂಬೆ ಅಂಬೆ ಎಂದು ಕರೆವುತ್ತಲಿದ್ದೇನೆ,
ಅಂಬೆ ಅಂಬೆ ಎಂದು ಒರಲುತ್ತಲಿದ್ದೇನೆ,
ಕೂಡಲಸಂಗಮದೇವ `ಬಾಳು ಬಾಳೆಂಬನ್ನಕ್ಕ.

 

 

ಅಂಗದಲ್ಲಿ ಲಿಂಗಸಂಗ, ಲಿಂಗದಲ್ಲಿ ಅಂಗಸಂಗವ ಮಾಡಿಹೆನೆಂದಡೆ,
ಸಂದು ಭೇದವಳಿವ ಪರಿ ಎಂತು ಹೇಳಾ
ಅಂಗದಲ್ಲಿ ಸಂಗವ ಮಾಡಿಹೆನೆಂದಡೆ,
ಮುಂದುಗೆಡಿಸಿ ಕಾಡುವನು ಶಿವನು.
ಕಾಮವೆಂಬ ಬಯಕೆಯಲ್ಲಿ
ಅಳಲಿಸುವ ಬಳಲಿಸುವ ಶಿವನು.
ಲಿಂಗದಲ್ಲಿ ಅಂಗವ ತಂದು ನಿಕ್ಷೇಪಿಸಿಹೆನೆಂದಡೆ,
ಅಂಗದಿಂದ ಅತ್ತತ್ತಲೋಸರಿಸಿ ಓಡುವನಯ್ಯಾ ಶಿವನು.
ಹೆಣ್ಣು ಗಂಡಾದಡೆ ಸಂಗಕ್ಕೆ ಒಲಿವನು ಕೇಳಾ ಶಿವನು.
ಕೂಡಲಸಂಗಮದೇವರ ಬೆರಸುವಡೆ,
ಬ್ಥಿನ್ನವಿಲ್ಲದೆ ಕಲಿಯಾಗಿರಬೇಕು ಕೇಳಾ ಅವ್ವಾ.

 

 

ಅಲಗಲಗು ಮೋಹಿಸಿದಲ್ಲದೆ ಕಲಿತನವ ಕಾಣಬಾರದು.
ನುಡಿದ ನುಡಿ ಜಾರಿದಡೆ ಮನಕ್ಕೆ ಮನ ನಾಚಬೇಕು,
ಶಬ್ದಲೊಟ್ಟೆಯತನದಲ್ಲಿ ಎಂತಪ್ಪುದಯ್ಯಾ ಭಕ್ತಿ,
ಪಾಪಿಯ ಕೂಸನೆತ್ತಿದಂತೆ.
ಕೂಡಲಸಂಗಮದೇವರ ಭಕ್ತಿ
ಅಳಿಮನದವರಿಗೆ ಅಳವಡದಯ್ಯಾ.

 

 

ಅಂಗದ ಮೇಲಣ ಲಿಂಗ ಹಿಂಗಿ ಬಂದ ಸುಖವನಾರಿಗರ್ಪಿಸುವೆ
ಹಿಂಗಲಾಗದು, ಭಕ್ತಿಪಥಕ್ಕೆ ಸಲ್ಲದಾಗಿ,
ಹಿಂಗಲಾಗದು, ಶರಣಪಥಕ್ಕೆ ಸಲ್ಲದಾಗಿ,
ಕೂಡಲಸಂಗಮದೇವರ ಹಿಂಗಿ ನುಂಗಿದುಗುಳು ಕಿಲ್ಬಿಷ.

 

 

ಅಲಗಲಗು ಮೋಹಿಸಿದಲ್ಲದೆ ಕಲಿತನವ ಕಾಣಬಾರದು.
ನುಡಿದ ನುಡಿ ಜಾರಿದಡೆ ಮನಕ್ಕೆ ಮನ ನಾಚಬೇಕು,
ಶಬ್ದಲೊಟ್ಟೆಯತನದಲ್ಲಿ ಎಂತಪ್ಪುದಯ್ಯಾ ಭಕ್ತಿ,
ಪಾಪಿಯ ಕೂಸನೆತ್ತಿದಂತೆ.
ಕೂಡಲಸಂಗಮದೇವರ ಭಕ್ತಿ
ಅಳಿಮನದವರಿಗೆ ಅಳವಡದಯ್ಯಾ.

 

 

ಅಂಗದ ಮೇಲಣ ಲಿಂಗ ಹಿಂಗಿ ಬಂದ ಸುಖವನಾರಿಗರ್ಪಿಸುವೆ
ಹಿಂಗಲಾಗದು, ಭಕ್ತಿಪಥಕ್ಕೆ ಸಲ್ಲದಾಗಿ,
ಹಿಂಗಲಾಗದು, ಶರಣಪಥಕ್ಕೆ ಸಲ್ಲದಾಗಿ,
ಕೂಡಲಸಂಗಮದೇವರ ಹಿಂಗಿ ನುಂಗಿದುಗುಳು ಕಿಲ್ಬಿಷ.

 

 

ಅಯ್ಯಾ, ಎನ್ನ ಕಾಯದಲ್ಲಿ ಮಡಿವಾಳನ ತೋರಿದ,
ಎನ್ನ ಮನದಲ್ಲಿ ತನ್ನ ನಿಲವ ತೋರಿದ,
ಎನ್ನ ಅರಿವಿನಲ್ಲಿ ನಿಮ್ಮ ತೋರಿದ,
ಇಂತೀ ತ್ರಿವಿಧಸ್ವಾಯತವನು
ಎನ್ನ ಸರ್ವಾಂಗದಲ್ಲಿ ಪ್ರತಿಷ್ಠಿಸಿ ತೋರಿದ.
ಕೂಡಲಸಂಗಮದೇವಯ್ಯಾ,
ಚೆನ್ನಬಸವಣ್ಣನ ಕರುಣದಿಂದ
ಮಡಿವಾಳನೆಂಬ ಪರುಷ ಸಾಧ್ಯವಾಯಿತ್ತೆನಗೆ.

 

 

ಅಷ್ಟಷಷ್ಟಿಯಾದವರೆಲ್ಲ ತೀರ್ಥವಾಸಿಗಳಪ್ಪರೆ ?
ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡುವರೆಲ್ಲ
ಲಿಂಗಾರ್ಚಕರಪ್ಪರೆ, ಅಯ್ಯಾ ?
ವೇಷವ ಹೊತ್ತು ಗ್ರಾಸಕ್ಕೆ ತಿರುಗುವ
ಈ ವೇಷ ದುರಾಚಾರಿಗಳ ಮೆಚ್ಚುವನೆ
ಕೂಡಲಸಂಗಮದೇವ ?

 

 

ಅಹುದೆಂದರಿಯೆ, ಆಗದೆಂದರಿಯೆ,
ಆದಿಪಥವ ತೋರಲರಿಯೆ,
ಸತ್ಯವನರಿಯೆ, ಸಹಜವನರಿಯೆ,
ಸಜ್ಜನ ಶುದ್ಧವ ಮುನ್ನರಿಯೆ.
ನಿಮ್ಮ ಶರಣರ ಒಕ್ಕುದನುಂಡಿಪ್ಪೆ
ಕೂಡಲಸಂಗಮದೇವಾ.

 

 

ಅಯ್ಯಾ, ಕೊಟ್ಟ ಲಿಂಗವ ಮರಳಿ ಕೊಂಡು ಬಾ ಎಂದು
ಎನ್ನನಟ್ಟಿದನಯ್ಯಾ ಶಶಿಧರನು ಮತ್ರ್ಯಕ್ಕೆ.
ನಿಮ್ಮ ಮುಖದಿಂದ ಎನ್ನ ಭವ ಹರಿವುದೆಂದು
ಹರಹಿಕೊಂಡಿದ್ದೆನಯ್ಯಾ ದಾಸೋಹವನು.
ನಿಮ್ಮ ಬರವ ಹಾರಿ ಸವೆದವು ಒಂದನಂತ ದಿನಗಳು,
ಇಂದೆನ್ನ ಪುಣ್ಯದ ಫಲದಿಂದ ಎನಗೆ ಗೋಚರವಾದಿರಿ,
ಹಿಂದಣ ಸಂದೇಹ ಸೂತಕ ಹಿಂಗಿತ್ತು.
ಎನ್ನ ಪ್ರಾಣಲಿಂಗವು ನೀವೇ ಆಗಿ, ಎನ್ನ ಸರ್ವಾಂಗಲಿಂಗದಲ್ಲಿ ಸನ್ನಿಹಿತವಾಗಿ,
ಎನ್ನ ಚಿಂತೆಯ ನಿಶ್ಚಿಂತೆಯ ಮಾಡಾ ಕೂಡಲಸಂಗಮದೇವ ಪ್ರಭುವೆ.

 

 

ಅಷ್ಟವಿಧಾರ್ಚನೆ ಷೋಡಶೋಪಚಾರವಲ್ಲದೆ
ನಿಮ್ಮ ಮುಟ್ಟಲರಿಯದರ ಕಂಡಡೆ, ಅಯ್ಯ ಎಂತೆಂಬೆನವರ
ಆವ ಭಾವದಲ್ಲಿ, ಆವ ಜ್ಞಾನದಲ್ಲಿ, ಆವ ಮುಖದಲ್ಲಿ
ಅರಿವವರದಾರಯ್ಯಾ ಏನೆಂಬೆ
ನಿಮ್ಮಲ್ಲಿ ಸಮ್ಯಕ್ಕರಾದ ಸತ್ಯಶರಣರ ಕಂಡು,
ಕೂಡಲಸಂಗಮದೇವಾ, ಅವರನಯ್ಯ ಎಂಬೆನು.

 

 

ಅಂದಣವನೇರಿದ ಸೊಣಗನಂತೆ
ಕಂಡಡೆ ಬಿಡದು ತನ್ನ ಮುನ್ನಿನ ಸ್ವಭಾವವನು.
ಸುಡು, ಸುಡು, ಮನವಿದು ವಿಷಯಕ್ಕೆ ಹರಿವುದು,
ಮೃಡ ನಿಮ್ಮನನುದಿನ ನೆನೆಯಲೀಯದು.
ಎನ್ನೊಡೆಯ ಕೂಡಲಸಂಗಮದೇವಾ
ನಿಮ್ಮ ಚರಣವ ನೆನೆವಂತೆ ಕರುಣಿಸು-
ಸೆರಗೊಡ್ಡಿ ಬೇಡುವೆ, ನಿಮ್ಮ ಧರ್ಮ

 

 

ಅಸ್ತಿ ಭಾತಿಯೆಂಬ ಬ್ಥಿತ್ತಿಯ ಮೇಲೆ,
ಕ್ರೀ ನಾಮ ರೂಪವೆಂಬ ಚಿತ್ರ ಬರೆಯಿತ್ತು.
ಇಲ್ಲದ ಬ್ಥಿತ್ತಿಯ ಮೇಲೆ ಉಂಟೆಂಬ ಚಿತ್ರದಂತಿರ್ದಿತ್ತು.
ಅದೆಂತೆಂದಡೆ;
ಅಸ್ತಿ ಭಾತಿ ಪ್ರಿಯಂ ರೂಪಂ ನಾಮ ಚೇತ್ಯಂಶಪಂಚಕಂ
ಆದ್ಯತ್ರಯಂ ಬ್ರಹ್ಮರೂಪಂ ಮಾಯಾರೂಪಂ ತತೋದ್ವಯಂ
ಎಂದುದಾಗಿ-
ಎನಗಿದೇ ಮಾಯೆಯಾಗಿ ಕಾಡಿತ್ತು, ಕೂಡಲಸಂಗಮದೇವಾ.

 

 

ಅಳೆವುತ್ತ ಅಳೆವುತ್ತ ಬಳಲುವರಲ್ಲದೆ, ಕೊಳಗ ಬಳಲುವುದೆ
ನಡೆವುತ್ತ ನಡೆವುತ್ತ ಬಳಲುವರಲ್ಲದೆ, ಬಟ್ಟೆ ಬಳಲುವುದೆ
ಶ್ರವವ ಮಾಡುತ್ತ ಮಾಡುತ್ತ ಬಳಲುವರಲ್ಲದೆ, ಕೋಲು ಬಳಲುವುದೆ
ನಿಜವನರಿಯದ ಭಕ್ತ ಬಳಲುವನಲ್ಲದೆ, ಲಿಂಗ ಬಳಲುವುದೆ
ಕೂಡಲಸಂಗಮದೇವಾ, ಅರಸರಿಯದ ಬಿಟ್ಟಿಯೋ.

 

 

ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ
ಸ್ಥಾವರದೈವಕ್ಕೆರಗಲಾಗದು.
ತನ್ನ ಪುರುಷನ ಬಿಟ್ಟು ಅನ್ಯಪುರುಷನ ಸಂಗ ಸಲ್ಲುವುದೇ ರಿ
ಕರಸ್ಥಲದ ದೇವನಿದ್ದಂತೆ
ಧರೆಯ ಮೇಲಣ ಪ್ರತಿಷ್ಠೆಗೆರಗಿದಡೆ
ನರಕದಲ್ಲಿಕ್ಕುವ ಕೂಡಲಸಂಗಮದೇವ.

 

 

ಅನುಭಾವವಿಲ್ಲದ ಭಕ್ತಿ ಅನುವಿಂಗೆ ಬಾರದು,
ಅನುಭಾವವಿಲ್ಲದ ಲಿಂಗ ಸಮರಸಸುಖಕ್ಕೆ ನಿಲುಕದು,
ಅನುಭಾವವಿಲ್ಲದ ಪ್ರಸಾದ ಪರಿಣಾಮವ ಕೊಡದು,
ಅನುಭಾವವಿಲ್ಲದ ಏನನೂ ಅರಿಯಬಾರದು.
ತನ್ನಲ್ಲಿ ತಾ ಸನ್ನಿಹಿತವುಳ್ಳಡೆ
ಶಿವಶರಣರ ಸಂಗವೇತಕ್ಕೆನಲುಂಟೆ
ಕೂಡಲಸಂಗಮದೇವಯ್ಯಾ,
ನಿಮ್ಮ ಅನುಭಾವ
ಮಾತಿನ ಮಥನವೆಂದು ನುಡಿಯಬಹುದೆ ಪ್ರಭುವೆ

 

 

ಅಂಜದಿರಂಜದಿರು ಹಂದೆ, ಓಡದಿರು ಓಡದಿರು ಹೇಡಿ,
ಆಳಿನಾಳು ಕೀಳಾಳು ಬಹರೆ
ಹೋಗದಿರು, ಹೋಗದಿರು, ಕೂಡಲಸಂಗಮದೇವಾ.

 

 

ಅಚ್ಚ ಶರಣರು ನಿಮ್ಮ ನಿಚ್ಚ ನೆನೆವರು,
ಬಚ್ಚ ಬರಿಯ ಮಾತನಾಡುವೆನು.
ಒಪ್ಪಚ್ಚಿ ಅರೆಭಕ್ತಿ, ನೆನೆಯಲೀಯದು ನಿಮ್ಮ.
ಮೆಚ್ಚರು ನಿಮ್ಮವರು ಎನ್ನನು ಕೂಡಲಸಂಗಮದೇವಾ.

 

 

ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ತನು ಹಾಳಾುತ್ತಯ್ಯಾ,
ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಮನ ಹಾಳಾುತ್ತಯ್ಯಾ,
ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಕರ್ಮಛೇದನವಾುತ್ತಯ್ಯಾ,
ನಿಮ್ಮವರು ಅಡಿಗಡಿಗೆ ಹೇಳಿ ಭಕ್ತಿಯೆಂಬೀ ಒಡವೆಯನು
ದಿಟವ ಮಾಡಿ ತೋರಿದರು ಕಾಣಾ, ಕೂಡಲಸಂಗಮದೇವಾ

 

 

ಅಗ್ನಿಯಾಧಾರದಲ್ಲಿ ಕಬ್ಬುನ ನೀರುಂಬುದಯ್ಯಾ,
ಭೂಮಿಯಾಧಾರದಲ್ಲಿ ವೃಕ್ಷ ನೀರುಂಬುದಯ್ಯಾ,
ಜಂಗಮವಾಪ್ಯಾಯನವಾದಡೆ ಲಿಂಗ ಸಂತ್ಟುಯಹುದಯ್ಯಾ.
ವೃಕ್ಷಸ್ಯ ವದನಂ ಭೂಮಿಃ ಸ್ಥಾವರಸ್ಯ ಚ ಜಂಗಮಃ
ಅಹಂ ತುಷ್ಟೋsಡಿಸ್ಮ್ಯುಮಾದೇವಿ ಉಭಯೋರ್ಲಿಂಗಜಂಗಮಾತ್
ಇದು ಕಾರಣ ಕೂಡಲಸಂಗಮದೇವರಲ್ಲಿ
ಜಂಗಮವಾಪ್ಯಾಯನವಾದಡೆ ಲಿಂಗಸಂತ್ಟು

 

 

ಅಷ್ಟವಿಧಾರ್ಚನೆ ಷೋಡಶೋಪಚಾರವ
ಅಂದಂದಿನ ಕೃತ್ಯವ ಅಂದಂದಿಗೆ ಆನು ಮಾಡಿ ಶುದ್ಧನಯ್ಯಾ.
ಹಂಗು ಹರಿಯಿಲ್ಲದ ಕಾರಣ,
ಕೂಡಲಸಂಗಮದೇವ ನಿಷ್ಫಲದಾಯಕನಾಗಿ
ಆನು ಮಾಡಿ ಶುದ್ಧನಯ್ಯಾ.

 

 

ಅಳಿವನಲ್ಲ, ಉಳಿವನಲ್ಲ, ಪ್ರಳಯವೆಂಬುದ ಮುನ್ನರಿಯನು,
ಕಳಾಕುಳರಹಿತನು, ಉಭಯಕುಳರಹಿತನು,
ಅರಿವ ಬೈಚಿಟ್ಟು ಮೆರೆವ ಗಮನನಲ್ಲ.
ಕೂಡಲಸಂಗಯ್ಯನೆಂಬ ಶಬ್ದಮುಗ್ಧನ
ಭಾವದ ಬಳಕೆಯಲ್ಲಿ ಗೆಲಬುಹದೆ ಹೇಳಾ

 

 

ಅಡ್ಡದೊಡ್ಡ ನಾನಲ್ಲಯ್ಯಾ, ದೊಡ್ಡ ಬಸುರನಲ್ಲಯ್ಯಾ,
ದೊಡ್ಡವರನಲ್ಲದೆ ನಿಮ್ಮ ಶರಣರು ಮನ್ನಿಸರಯ್ಯಾ.
ಹಡೆದುಂಬ ಸೂಳೆಯಂತೆ ಧನವುಳ್ಳವರನರಸಿ ಅರಸಿ
ಬೋದ್ಥಿಸಲು, ಪ್ರಾರ್ಥಿಸಲು ಮುನ್ನ ನಾನರಿಯೆನಯ್ಯಾ,
ದೊಡ್ಡತನವೆನಗಿಲ್ಲಯ್ಯಾ, ಅಂಜುವೆನಂಜುವೆ ನಿಮ್ಮ ಪ್ರಮಥರಿಗೆ.
ಅನಾಥ ನಾನಯ್ಯಾ, ಕೂಡಲಸಂಗಮದೇವಾ.

 

 

 

ಅಸಮಾಕ್ಷಲಿಂಗಕ್ಕೆ ಅನ್ಯದೈವವ ಸರಿಯೆಂಬವನ ಬಾಯಲ್ಲಿ
ಮಸೆದ ಕೂರಲಗನಿಕ್ಕದೆ ಮಾಬನೆ
ಹುಸಿಯಾಗಿ ನುಡಿವವನ ನಾಯಾಗಿ ಬಗುಳಿಸನೆ
ಹಿರಿಯರುತ್ತಮರೆನ್ನದವರ ಕುದುರೆಯಾಗಿ ಕಟ್ಟಿಸನೆ
ಗುರುಲಘುವೆನ್ನದವರ ಬಾಯಲ್ಲಿ ಮೆಟ್ಟಿ ಹುಡಿಯ ಹೊಯ್ಯದೆ ಮಾಬನೆ
ಪರಸ್ತ್ರೀಗಳುಪಿದವರ ಗಾಣದಲಿಕ್ಕಿ ಹಿಳಿಯನೆ
ಪರಧನಕ್ಕಳುಪಿದವರ ಹಿಡಿ ಖಂಡವ ಕೊಯ್ಯನೆ
ಎಲೆ ಕೂಡಲಸಂಗಮದೇವಾ, ನಿಮ್ಮ ಹೇಳಿದ ಹೇಳಿಕೆಯಿಂದ
ಪಿಂಬೇರ ಮೈ[ಲುಗ] ಮೇಳವಾಡುತ ಇದ್ದ ಕಾಣಾ, ತೃಜಗದೊಳಗೆ.

 

 

ಅಂದಂದಿನ ಹೊದ್ದಿಗೆಯ ಬಿಂದುಮಾತ್ರದಲಾದ
ಅಂದವ ಕೆಡಿಸಲರಿಯದ ಅಂಧಕರ ನೋಡಾ.
ಸಮರಸವಿಲ್ಲದೆ ನೆರಹಿ ಮಾಡಿ, ಭಕ್ತರಾದೆವೆಂಬವರನೇನೆಂಬೆ
ಆಚಾರವಂಚಕರ ಎನಗೆ ತೋರದಿರು
ಕೂಡಲಸಂಗಮದೇವಾ, ನಿಮ್ಮ ಧರ್ಮ !

 

 

ಅದ್ವೈತವ ಅಂತರಂಗದಲ್ಲಿ ಅರಿದು
ಹೊರಗೆ ದಾಸೋಹವ ಮಾಡದಿರ್ದಡೆ
ಎಂತಯ್ಯಾ ಉಭಯ ಸಂದೇಹದಲ್ಲಿ ನಿಜವಪ್ಪುದು
ನಿಮ್ಮ ಶರಣರ ಮನ ನೊಂದಲ್ಲಿ
ನಾನು ಸೈರಿಸಿಕೊಂಬೆನೆಂತಯ್ಯಾ
ಕೂಡಲಸಂಗಮದೇವಾ,
ಹಾವು ಸಾಯದೆ ಕೋಲು ನೋಯದಂತೆ ಮಾಡಾ, ನಿಮ್ಮ ಧರ್ಮ.

 

 

ಅರಿವು ಮರವೆಯೊಳಡಗಿ, ಮರವೆ ಅರಿವಿನೊಳಡಗಿ,
ತೆರಹಿಲ್ಲದಿರ್ದೆನೆಂಬ ಹಮ್ಮಿದೇನೋ, ಹಮ್ಮಿದೇನೋ
ಬ್ರಹ್ಮಾದ್ ಬ್ರಹ್ಮವ ನುಂಗಿ, ಮತ್ತಾ ಪರಬ್ರಹ್ಮನು ತಾನೆಂದೆಂಬ
ಹಮ್ಮಿದೇನೊ, ಹಮ್ಮಿದೇನೊ
ಆದಿ ಶೂನ್ಯವು ಶೂನ್ಯ, ಮಧ್ಯ ಶೂನ್ಯವು ಶೂನ್ಯ,
ಅಂತ್ಯ ಶೂನ್ಯವು ಶೂನ್ಯ,
ಶೂನ್ಯವಾದ ಬಳಿಕ ಅಲ್ಲಿಂದತ್ತ ನಿಂದ ನಿಲವನಾರು ಬಲ್ಲರು ಹೇಳಾ
ಬಯಲು ಚಿತ್ರಿಸಿದ ಚಿತ್ರವನಾ ಬಯಲರಿಯದಂತೆ
ಕೂಡಲಸಂಗಮದೇವಾ, ನಿಮ್ಮ ಶರಣರ ನಿಲವು.

 

 

 

ಅಗಳೂ ಲೋಗರ ಮನೆಯ ಬಾಗಿಲ ಕಾಯ್ದುಕೊಂಡಿಪ್ಪವು ಕೆಲವು
ದೈವಂಗಳು.
ಹೋಗೆಂದಡೆ ಹೋಗವು,
ನಾಯಿಗಿಂದ ಕರಕಷ್ಟ ಕೆಲವು ದೈವಂಗಳು.
ಲೋಗರ ಬೇಡಿಕೊಂಡುಂಬ ದೈವಂಗಳು
ತಾವೇನ ಕೊಡುವವು ಕೂಡಲಸಂಗಮದೇವಾ

 

 

ಅಂಕ ಕಂಡಾ, ಕೋಲಾಸೆ ಮತ್ತೇಕಯ್ಯಾ
ಲೆಂಕ ಕಂಡಾ, ಪ್ರಾಣದಾಸೆ ಮತ್ತೇಕಯ್ಯಾ
ಭಕ್ತ ಕಂಡಾ, ತನುಮನಧನದಾಸೆ ಮತ್ತೇಕಯ್ಯಾ
ನಿಮ್ಮ ಅಂಕೆಗೆ ಝಂಕೆಗೆ ಶಂಕಿತನಾದಡೆ
ಎನ್ನ ಲೆಂಕತನಕ್ಕೆ ಹಾನಿ ಕೂಡಲಸಂಗಮದೇವಾ.

 

 

ಅಷ್ಟತನುಮೂರ್ತಿ ಲಿಂಗವೆಂದೆಂಬರು ಕೇಳಿರಯ್ಯಾ:
ಆದಿಯ ಮಗ ಅತೀತ, ಅತೀತನ ಮಗ ಆಕಾಶ,
ಆಕಾಶನ ಮಗ ವಾಯು, ವಾಯುವಿನ ಮಗ ಅಗ್ನಿ,
ಅಗ್ನಿಯ ಮಗ ಅಪ್ಪು, ಅಪ್ಪುವಿನ ಮಗ ಪೃಥ್ವಿ,
ಪೃಥ್ವಿಯಿಂದ ಸಕಲ ಜನನವು.
ಮನಸಿನ ಮಗ ಚಂದ್ರ, ನಯನದ ಮಗ ಸೂರ್ಯ,
ದೇಹದ ಮಗನಾತ್ಮ,
ಇಂತೀ ಅಷ್ಟತನುವೆಲ್ಲಕ್ಕೆಯು ಉತ್ಪತ್ಯವುಂಟು.
ಉತ್ಪತ್ಯರಹಿತ ಅಯೋನಿಜ ಶೂನ್ಯನಿರಾಳ
ನಮ್ಮ ಕೂಡಲಸಂಗಮದೇವಂಗೆ ಮಾತಾಪಿತರಿಲ್ಲ.

 

 

ಅಂಜಿದಡೆ ಮಾಣದು, ಅಳುಕಿದಡೆ ಮಾಣದು,
ವಜ್ರಪಂಜರದೊಳಗಿದ್ದಡೆ ಮಾಣದು, ತಪ್ಪದುವೋ ಲಲಾಟಲಿಖಿತ.
ಕಕ್ಕುಲತೆಗೆ ಬಂದಡೆ ಆಗದು ನೋಡಾ.
ಧೃತಿಗೆಟ್ಟು, ಮನ ಧಾತುಗೆಟ್ಟಡೆ ಅಪ್ಪುದು ತಪ್ಪದು,
ಕೂಡಲಸಂಗಮದೇವಾ.

 

 

ಅರ್ಥ ಪ್ರಾಣ ಅಬ್ಥಿಮಾನಕ್ಕೆ ಒಡೆಯರು ಸದ್‍ಭಕ್ತರಲ್ಲದೆ
ಎನಗಾರೂ ಇಲ್ಲಯ್ಯಾ.
`ಭೃತ್ಯಾಪರಾಧಃ ಸ್ವಾಮಿನೋ ದಂಡಃ
ಕೂಡಲಸಂಗಮದೇವಾ, ನೀವೇ ಪ್ರಮಾಣು.

 

 

ಅವರ ನಡೆಯೊಂದು ನುಡಿಯೊಂದಾದಡೆ
ಶಿವಾಚಾರಕ್ಕವರು ಸಲ್ಲರಯ್ಯಾ !
ಬಲ್ಲನು, ಸಾತ್ವಿಕರಲ್ಲದವರನೊಲ್ಲನು.
ಶಿವಾಚಾರವ ಬಲ್ಲನು, ಅಲ್ಲಿ ನಿಲ್ಲನು.
ಪ್ರಪಂಚಿಯ ಮನವನೊಲ್ಲನು ಕೂಡಲಸಂಗಮದೇವನು.

 

 

ಅರ್ಥ ಪ್ರಾಣ ಅಭಿಮಾನದಲ್ಲಿ ವಂಚನೆುಲ್ಲದಿಹುದೆ ಭಕ್ತಿ,
ಹೆಚ್ಚು ಕುಂದಿಲ್ಲದಿಹುದೆ ಸಮಯಾಚಾರ,
ಜಂಗಮವೆ ಲಿಂಗವೆಂಬುದಕ್ಕೆ ಏನು ಗುಣ
ಮನದ ಲಂಪಟತನ ಹಿಂಗದಾಗಿ
ಒಡೆಯರ ಬರವಿಂಗೆ ಕುನ್ನಿ ಬಾಲವ ಬಡಿದಡೆ
ವೆಚ್ಚವೇನು ಹತ್ತುವುದು ಕೂಡಲಸಂಗಮದೇವಾ

 

 

ಅರಿಸಿನವನೆ ಮಿಂದು, ಹೊಂದೊಡಿಗೆಯನೆ ತೊಟ್ಟು,
ಪುರುಷನ ಒಲವಿಲ್ಲದ ಲಲನೆಯಂತೆ ಆನಿದ್ದೇನಯ್ಯಾ.
ವಿಭೂತಿಯನೆ ಹೂಸಿ, ರುದ್ರಾಕ್ಷಿಯನೆ ಕಟ್ಟಿ,
ಶಿವ ನಿಮ್ಮ ಒಲವಿಲ್ಲದಂತೆ ಆನಿದ್ದೇನಯ್ಯಾ.
ಕೆಟ್ಟು ಬಾಳುವರಿಲ್ಲ ಎಮ್ಮವರ ಕುಲದಲ್ಲಿ,
ನೀನೊಲಿದಂತೆ ಸಲಹಯ್ಯಾ, ಕೂಡಲಸಂಗಮದೇವಾ.

 

 

ಅಷ್ಟದಳ ಕಮಲವ ಸುತ್ತುವ ಜೀವಾತ್ಮನ
ಮೆಟ್ಟಿದ ದಳವನರಿಯದೆ,
ಆನು ಭಕ್ತನೆಂತೆಂಬೆ ! ಆನು ಶರಣನೆಂತೆಂಬೆ !
ಆನು ಲಿಂಗೈಕ್ಯನೆಂತೆಂಬೆ ಕೂಡಲಸಂಗಮದೇವಾ
ಎನ್ನ ಮನವು ಸಮಾಧಾನವಾಗದನ್ನಕ್ಕ

 

 

ಅಳವಡಿಸಿದ ಪದಾರ್ಥ ಅರ್ಪಿತಕ್ಕೆ ಸರಿಯಾಯಿತ್ತು,
ಅಳವಡಿಸದ ಮುನ್ನವೆ ಕೈಕೊಳ್ಳುತ್ತೈದಾನೆ ಶಿವನು,
ಸಂದ ಪದಾರ್ಥ ಸಲ್ಲಲಿ.
ಕೂಡಲಸಂಗಮದೇವರ ಆರೋಗಣೆಯ ಅವಸರಕ್ಕೆ
ಸಂಚಿತ ಸಯದಾನವ ತೆಗೆಸಿರೆ, ಸೊಡ್ಡಳ ಬಾಚರಸೆರೆ.

 

 

ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ತನು ಹಾಳಾಯಿತ್ತಯ್ಯಾ,
ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಮನ ಹಾಳಾಯಿತ್ತಯ್ಯಾ,
ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಕರ್ಮಛೇದನವಾಯಿತ್ತಯ್ಯಾ,
ನಿಮ್ಮವರು ಅಡಿಗಡಿಗೆ ಹೇಳಿ ಭಕ್ತಿಯೆಂಬೀ ಒಡವೆಯನು
ದಿಟವ ಮಾಡಿ ತೋರಿದರು ಕಾಣಾ, ಕೂಡಲಸಂಗಮದೇವಾ.

 

 

ಅರ್ಚಿಸಲರಿಯೆ, ಪೂಜಿಸಲರಿಯೆ,
ನಿಚ್ಚ ಶಿವರಾತ್ರಿಯ ನಾ ಮಾಡಲರಿಯೆ.
ಕಪ್ಪಡಿವೇಷದಿಂದಾನು ಬಂದಾಡುವೆ, ಕಪ್ಪಡಿವೇಷದಿಂದ.
ಈಶ ನಾ ನಿಮ್ಮ ದಾಸರ ದಾಸಿಯ ದಾಸನಯ್ಯಾ,
ನಿಮ್ಮ ವೇಷಧಾರಿಯ ಮನೆಯ ಪಂಗುಳ ನಾನಯ್ಯಾ,
ಕೂಡಲಸಂಗಮದೇವಾ
ನಿಮ್ಮ ಲಾಂಛನ ಧರಿಸಿಪ್ಪ ಉದರಪೋಷಕ ನಾನಯ್ಯಾ. 

 

 

ಅರಸರು ಮಂಚಕ್ಕೆ ಬರಿಸಿ, ಎನ್ನ ಬೆರಸಿದ ಬಳಿಕ
ಆನು ಅಂಜುವಳೇ ಆನು ಸಿರಿಯಕ್ಕನೇ.
ಪರುಷ ಮುಟ್ಟಿದ ಬಳಿಕ ಲೋಹವೇ
ಕೂಡಲಸಂಗಮದೇವ, ಎನ್ನನೊಲ್ಲದಡಾನು ಬದುಕುವೆನೆ

 

 

ಅಯ್ದುದೇ ಬ್ರಹ್ಮನ ಕಪಾಲ ಕರದಲ್ಲಿ,
ಅಯ್ದುದೇ ವಿಷ್ಣುವಿನ ನಯನ ಪಾದದಲ್ಲಿ,
ಅಯ್ದುದೇ ಕಾಮನ ಸುಟ್ಟ ಭಸ್ಮ ಮೈಯ ಮೇಲೆ,
ಮುಖ ಮೂದಲೆಯೇಕಯ್ಯಾ, ಕೂಡಲಸಂಗಮದೇವಾ.

 

 

ಅರಿಯಲಿಲ್ಲದ ಅರಿವು ಅವಗ್ರಹಿಸಿತ್ತಾಗಿ,
ಅರಿಯಲಿಲ್ಲದ ಮರೆಯಲಿಲ್ಲದ ನಿಜವು ನಿಂದಿತ್ತಾಗಿ,
ನಿರ್ನಾಮವಾಯಿತ್ತು, ನಿಃಪತಿಯಾಯಿತ್ತು,
ಅಗಮ್ಯದಲ್ಲಿ ಗಮನ ಕೆಟ್ಟಿತ್ತು, ನಿಂದಲ್ಲಿ ನಿರಾಳವಾಯಿತ್ತು,
ಕೂಡಲಸಂಗಮದೇವರಲ್ಲಿ ಶಬ್ದಮುಗ್ಧವಾಯಿತ್ತು.

 

 

ಅಯ್ಯಾ, ಶ್ರೀಮಹಾವಿಭೂತಿಯಿಂದ ಕಂಡೆ
ಆ ನಿಮ್ಮ ದಿವ್ಯ ಬೆಳಗಿನ ಹೊಳಹ, ಈ ಎನ್ನ ಕರಸ್ಥಲದೊಳಗೆ.
ಅಯ್ಯಾ, ಶ್ರೀಮಹಾರುದ್ರಾಕ್ಷಿಯಿಂದ ಕಂಡೆ
ಆ ನಿಮ್ಮ ದಿವ್ಯಮೂರ್ತಿಯ ಗೂಢವ, ಈ ಎನ್ನ ಕರಸ್ಥಲದೊಳಗೆ.
ಅಯ್ಯಾ, ಶ್ರೀಮಹಾಪಂಚಾಕ್ಷರಿಯಿಂದ ಕಂಡೆ
ಆ ನಿಮ್ಮ ದಿವ್ಯವಕ್ತ್ರಂಗಳ, ಈ ಎನ್ನ ಕರಸ್ಥಲದೊಳಗೆ.
ನಾ ಬಯಸುವ ಬಯಕೆ ಕೈಸಾರಿತ್ತಿಂದು
ಕೂಡಲಸಂಗಮದೇವಾ.

 

 

ಅವಲಕ್ಷಣ ನಾಯನುಡಿಯ ನಾಲಗೆಯ ಸಡಗರ
ಡೊವಿಗೆ ಮೃತ್ಯುವಿನ ನುಡಿಗೊಳಗಾಯಿತ್ತು.
ಬೇಡವೋ ಪರವಾದಿ ಗಳುಹದಿರು.
ಬೇಡವೊ ದೂಷಕ ಬಗುಳದಿರು.
ಭಕ್ತಿಗೆಯೂ ಬೋಟ್ಟಕ್ಕೆಯೂ ಜಾತಿಸೂತಕವುಂಟೆ
ಪರುಷ ಮುಟ್ಟಲು ಕಬ್ಬುನ ಹೊನ್ನಾಯಿತ್ತು, ಕಾಣಾ.
ನಮ್ಮ ಕೂಡಲಸಂಗನ ಶರಣರನವರಿವರೆಂದಡೆ
ಕುಂಭಿಪಾತಕ ನಾಯಕನರಕ ತಪ್ಪದು ಕಾಣಾ.

 

 

ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾವನವು,
ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಕಾರಣವು,
ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಸಾಧನವು,
ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಸಿದ್ಧಿ,
ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾಪಕ್ಷಯವು.
ಅಯ್ಯಾ ನಿಮ್ಮ ಪಂಚವಕ್ತ್ರಂಗಳೆ
ಪಂಚಮುಖದ ರುದ್ರಾಕ್ಷಿಗಳಾದವಾಗಿ,
ಅಯ್ಯಾ ಕೂಡಲಸಂಗಮದೇವಯ್ಯಾ,
ಎನ್ನ ಮುಕ್ತಿಪಥಕ್ಕೆ ಶ್ರೀಮಹಾರುದ್ರಾಕ್ಷಿಯೆ ಸಾಧನವಯ್ಯಾ.

 

 

ಅಯ್ಯಾ, ನಿಮ್ಮ ಶರಣರ ಸಂಗಸುಖವ ಏನೆಂದುಪಮಿಸುವೆನಯ್ಯಾ,
ನಿಮ್ಮ ಶರಣರ ಕೂಡೆ ಸಮಗೋಷಿ*ಯ
ಮಾಡುವುದನುಪಮಿಸಲಮ್ಮೆನಯ್ಯಾ.
ಕೂಡಲಸಂಗಾ, ನಿಮ್ಮ ಪ್ರಮಥರೆಲ್ಲರೂ
ನೆರೆದ ಗಣತಿಂಥಿಣಿಯೊಳಗೆನ್ನನೇನೆಂದರಿಯದೆ
ಅಗಲದಂತಿರಿಸಯ್ಯಾ, ನಾ ನಿಮ್ಮ ಧರ್ಮದ ಕವಿಲೆ.

 

 

ಅಡ್ಡ ತ್ರಿಪುಂಡ್ರದ, ಮಣಿಮಕುಟವೇಷದ
ಶರಣರ ಕಂಡಡೆ ನಂಬುವುದೆನ್ನ ಮನವು,
ನಚ್ಚುವುದೆನ್ನ ಮನವು, ಸಂದೇಹವಿಲ್ಲದೆ.
ಇವಿಲ್ಲದವರ ಕಂಡಡೆ ನಂಬೆ ಕೂಡಲಸಂಗಮದೇವಾ

 

 

ಅಕಟಕಟಾ, ಶಿವ ನಿನಗಿನಿತು ಕರುಣವಿಲ್ಲ,
ಅಕಟಕಟಾ ಶಿವ ನಿನಗಿನಿತು ಕೃಪೆಯಿಲ್ಲ,
ಏಕೆ ಹುಟ್ಟಿಸಿದೆ, ಇಹಲೋಕ ದುಃಖಿಯ
ಪರಲೋಕದೂರನ ಏಕೆ ಹುಟ್ಟಿಸಿದೆ
ಕೂಡಲಸಂಗಮದೇವಾ ಕೇಳಯ್ಯಾ,
ಎನಗಾಗಿ ಮತ್ತೊಂದು ತರುಮರನಿಲ್ಲವೆ

 

 

ಅಶನ ಕುಂದದು, ವ್ಯಸನ ಮಾಣದು,
ಆರತವಡಗದು, ಬೆವಹಾರ ಮಾಣದು.
ಮಜ್ಜನಕ್ಕೆರೆವೆನಯ್ಯಾ:ಕಾಯವಿಕಾರಿಯಾನು.
ಮಜ್ಜನಕ್ಕೆರೆವೆನಯ್ಯಾ:ಜೀವವಿಕಾರಿಯಾನು.
ಮಜ್ಜನಕ್ಕೆರೆವೆನಯ್ಯಾ:ಶರಣನಲ್ಲ, ಲಿಂಗೈಕ್ಯನಲ್ಲ.
ಕೂಡಲಸಂಗಮದೇವರಲ್ಲಿ
ಅಂತರಬೆಂತರ ನಾನಯ್ಯಾ

 

 

ಅರಸುವ ಬಳ್ಳಿ ಕಾಲ ತೊಡರಿದಂತಾಯಿತ್ತು,
ಬಯಸುವ ಬಯಕೆ ಕೈಸಾರಿದಂತಾಯಿತ್ತು,
ಹಲವು ದಿವಸಕೆ ನಂಟರ ಕಂಡಂತಾಯಿತ್ತು.
ಅಂದೊಮ್ಮೆ ಅನಿಮಿಷಂಗೆ ಕೋಳುಹೋದ ಲಿಂಗವೆಂದು
ಉಮ್ಮಹದಿಂದ ಮಂಗಳಾರತಿಯ ಬೆಳಗಿ,
ನವರತ್ನದ ಹಾರ ತೋರಣವ ಕಟ್ಟಿ,
ಸಂತೋಷದಿಂದೆನ್ನ ಮನವು ತೊಟ್ಟನೆ ತೊಳಲಿ,
ತಿಟ್ಟನೆ ತಿರುನಗೆಫ, ದೃಷ್ಟವ ಕಂಡೆನಯ್ಯಾ.
ಬಿಟ್ಟು ಹಿಂಗಿದವೆನ್ನ ಭವಮಾಲೆಗಳು,
ಗೋಹೇಶ್ವರನ ಶರಣ ಪ್ರಭುದೇವರ ಕರಸ್ಥಲದೊಳಗೆ,
ಕೂಡಲಸಂಗಮದೇವರೆಂಬ ಲಿಂಗವ ಕಂಡೆನಾಗಿ

 

 

ಅಯ್ಯಾ, ನಿಮ್ಮ ವಂಶವಳಿಯಲು ಒಬ್ಬ ತೊತ್ತಿನ ಮಗ ಹುಟ್ಟಿದ.
ಆತನ ತೊತ್ತಿನ ಮಗ ನಾನಯ್ಯಾ,
ಬಳಿದೊತ್ತು, ಬಳಗದೊತ್ತು, ವಂಶದೊತ್ತು ನಾನಯ್ಯಾ.
ಕೂಡಲಸಂಗಮದೇವಯ್ಯಾ,
ನಿಮ್ಮ ಒಡೆತನಕ್ಕೆ ಕೇಡಿಲ್ಲವಾಗಿ, ಎನ್ನ ತೊತ್ತುತನಕ್ಕೆ ಕೇಡಿಲ್ಲ.

 

 

ಅನ್ಯವಿಚಾರವ ಮರೆದು ನಿಮ್ಮ ವಿಚಾರವೆಡೆಗೊಂಡಿತ್ತಾಗಿ,
ಪ್ರಾಣದ ನೆಲೆಗೆಟ್ಟಿತ್ತಯ್ಯಾ,
ದಶವಾಯುಗಳ ಸಂಚ ತಪ್ಪಿತ್ತಯ್ಯಾ,
ಕರಣಂಗಳ ಲಿಂಗಕಿರಣಂಗಳು ನುಂಗಿದವಯ್ಯಾ,
ಒಳಗೆ ಕರತಳಾಮಳಕಗೊಂಡೆನಯ್ಯಾ,
ಹೊರಗೆ ಅದೆಂತೆಂದರಿಯದೆ ನೀನೆ ಗತಿಯಾಗಿದ್ದೆ,
ಕೂಡಲಸಂಗಮದೇವಾ.

 

 

ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದಡೆ
ನಿಮ್ಮಾಣೆ, ನಿಮ್ಮ ಪ್ರಮಥರಾಣೆ !
ನಿಮ್ಮ ಪ್ರಸಾದಕ್ಕಲ್ಲದೆ ಬಾಯ್ದೆರೆಯೆನಯ್ಯಾ.
ಪ್ರಥಮಭವಾಂತರದಲ್ಲಿ
ಶಿಲಾದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮ್ಮ ಭೃತ್ಯನ ಮಾಡಿ ಎನನ್ನಿರಿಸಿಕೊಂಡಿರ್ದಿರಯ್ಯಾ.
ಎರಡನೆಯ ಭವಾಂತರದಲ್ಲಿ
ಸ್ಕಂದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮ್ಮ ಕಾರುಣ್ಯವ ಮಾಡಿರಿಸಿಕೊಂಡಿರ್ದಿರಯ್ಯಾ.
ಮೂರನೆಯ ಭವಾಂತರದಲ್ಲಿ
ನೀಲಲೋಹಿತನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮ್ಮ ಲೀಲಾವಿನೋದದಿಂದಿರಿಸಿಕೊಂಡಿರ್ದಿರಯ್ಯಾ.
ನಾಲ್ಕನೆಯ ಭವಾಂತರದಲ್ಲಿ
ಮನೋಹರನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮ್ಮ ಮನಃಪ್ರೇರಕನಾಗಲೆಂದಿರಿಸಿಕೊಂಡಿರ್ದಿರಯ್ಯಾ.
ಐದನೆಯ ಭವಾಂತರದಲ್ಲಿ
ಕಾಲಲೋಚನನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ಸರ್ವಕಾಲಸಂಹಾರವ ಮಾಡಿಸುತ್ತಿರ್ದಿರಯ್ಯಾ.
ಆರನೆಯ ಭವಾಂತರದಲ್ಲಿ
ವೃಷಭನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮಗೇರಲು ವಾಹನವಾಗಲೆಂದಿರಿಸಿಕೊಂಡಿರ್ದಿರಯ್ಯಾ.
ಏಳನೆಯ ಭವಾಂತರದಲ್ಲಿ
ಬಸವದಣ್ಣಾಯಕನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮ್ಮ ಒಕ್ಕುದ ಮಿಕ್ಕುದಕ್ಕೆ ಯೋಗ್ಯನಾಗಲೆಂದಿರಿಸಿಕೊಂಡಿರ್ದಿರಯ್ಯಾ.
ಇದು ಕಾರಣ ಕೂಡಲಸಂಗಮದೇವಾ,

 

 

ಅಶ್ವಮೇಧಯಾಗವಂತಿರಲಿ,
ಅಜಪೆ ಉಪದೇಶ ಸಮಾಧಿಯಂತಿರಲಿ, ಹೋ !
ಗಾಯತ್ರಿಯ ಜಪವಂತಿರಲಿ, ಹೋ !
ಜನಮೋಹನ ಮಂತ್ರವಂತಿರಲಿ, ಹೋ !
ಕೂಡಲಸಂಗನ ಶರಣರ ನುಡಿಗಡಣ
ಎಲ್ಲಕ್ಕಧಿಕ ನೋಡಾ

 

 

ಅರ್ಥಪ್ರಾಣಾಭಿಮಾನ ನಿಮ್ಮದೆಂಬೆ,
ಮತ್ತೆಯೂ ಆಸೆ ಬಿಡದನ್ನಕ್ಕ ಭಕ್ತನೆಂತಪ್ಪೆನಯ್ಯಾ
ಶರಣನೆಂತೆನಿಸುವೆನಯ್ಯಾ,
ಕೂಡಲಸಂಗನ ಶರಣರ ಸಕಲರತಿಗೆ ಸಲ್ಲದನ್ನಕ್ಕ

 

 

ಅರ್ಪಿತವ ಮಾಡುವ ಅವಧಾನವು, ಅನ್ಯವ ಸೋಂಕದ ಅವಧಾನವು,
ಅರಿಷಡ್ವರ್ಗಂಗಳ ಮುಟ್ಟಲೀಯದವಧಾನದ ಪರಿಯ ನೋಡಾ,
ಪಂಚಭೂತವೆಂಬ ಭವಿಯ ಕಳೆದು ಪ್ರಸಾದಿಯಾಗಿಪ್ಪ ಪರಿಯ ನೋಡಾ,
ಪಂಚೇಂದ್ರಿಯಂಗಳ ಗುಣವಳಿದು ಪಂಚವಿಂಶತಿತತ್ವದಲ್ಲಿ ಪರಿಣಾಮಿ
ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.

 

 

ಅರಿವುವಿಡಿದು, ಅರಿವನರಿದು,
ಅರಿವೆ ನೀವೆಂಬ ಭ್ರಾಂತು ಎನಗಿಲ್ಲವಯ್ಯಾ,
ಮರಹುವಿಡಿದು, ಮರಹ ಮರೆದು,
ಮರಹು ನೀವೆಂಬ ಮರಹಿನವ ನಾನಲ್ಲವಯ್ಯಾ.
ದೇಹ ಪ್ರಾಣಂಗಳ ಹಿಂಗಿ, ದೇಹವಿಡಿದು,
ದೇಹ ನಿಮ್ಮದೆಂಬ ಭ್ರಾಂತುಸೂತಕಿ ನಾನಲ್ಲವಯ್ಯಾ.
ನಿಮ್ಮ ಅರಿದ ಅರಿವ ಭಿನ್ನವಿಟ್ಟ ಕಂಡೆನಾದಡೆ
ನಿಮ್ಮಾಣೆ ಕಾಣಾ, ಕೂಡಲಸಂಗಮದೇವಾ.

 

 

ಅಯ್ಯಾ, ನಿಮ್ಮ ಶರಣನ ಮತ್ರ್ಯಕ್ಕೆ ತಂದೆಯಾಗಿ
ನೆನೆದು ಸುಖಿಯಾಗಿ ಆನು ಬದುಕಿದೆಯ್ಯಾ,
ಅದೇನು ಕಾರಣ ತಂದೆಯೆಂದರಿದೆನಯ್ಯಾ,
ಎನ್ನ ಕಾರಣ ತಂದೆಯೆಂದರಿದೆನಯ್ಯಾ,
ಅರಿದರಿದು, ನಿಮ್ಮ ಶರಣನು ಆಚರಿಸುವ ಆಚರಣೆಯ ಕಂಡು
ಕಣ್ದೆರೆದೆನಯ್ಯಾ, ಕೂಡಲಸಂಗಮದೇವಾ. 

 

 

ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ
ನಾನು ಜ್ಞಾನವೆಂಬ ವಾಹನವಾಗಿರ್ದೆ ಕಾಣಾ.
ಅಯ್ಯಾ, ನೀನು ನಾಟ್ಯಕ್ಕೆ ನಿಂದಲ್ಲಿ
ನಾನು ಚೈತನ್ಯವೆಂಬ ವಾಹನವಾಗಿರ್ದೆ ಕಾಣಾ.
ಅಯ್ಯಾ, ನೀನು ಆಕಾರವಾಗಿರ್ದಲ್ಲಿ
ನಾನು ವೃಷಭನೆಂಬ ವಾಹನವಾಗಿರ್ದೆ ಕಾಣಾ,
ಅಯ್ಯಾ, ನೀನೆನ್ನ ಭವವ ಕೊಂದೆಹೆನೆಂದು
ಜಂಗಮಲಾಂಛನವಾಗಿ ಬಂದಡೆ
ನಾನು ಭಕ್ತನೆಂಬ ವಾಹನವಾಗಿರ್ದೆ ಕಾಣಾ
ಕೂಡಲಸಂಗಮದೇವಾ

 

 

ಅಯ್ಯಾ, ನಿಮ್ಮ ಶರಣರೆನ್ನ ಪಾವನವ ಮಾಡಿ,
ತಿಳುಹಿ ತಮ್ಮಂತೆ ಎನ್ನ ಮಾಡಿದ ಬಳಿಕ,
ನಾನು ಅವರು ಮಾಡಿದಂತಾದೆನಯ್ಯಾ.
ನಾನೊಬ್ಬನು ನಿಮ್ಮ ಶರಣರ ಬಳಿಬಳಿಯವನು.
ಕೂಡಲಸಂಗನ ಶರಣರು ಮೆಚ್ಚಿ ಎನಗೊಲಿದಡೆ
ನಾನು ಬದುಕಿದೆನಲ್ಲದೆ, ಸಮರಸ ಸಂಗಕ್ಕೆ ಸರಿಯೆ
ಹೇಳಾ ಚೆನ್ನಬಸವಣ್ಣಾ

 

 

ಅರ್ಥಕ್ಕೆ ತಪ್ಪಿದಡೇನು, ಪ್ರಾಣಕ್ಕೆ ತಪ್ಪಿದಡೇನು,
ಅಭಿಮಾನಕ್ಕೆ ತಪ್ಪಿದಡೇನು
ಶರಣರು ಶರಣರಲ್ಲಿ ಗುಣವನರಸುವರೆ
ಕೂಡಲಸಂಗನ ಶರಣರು ನೊಂದು ಸೈರಿಸಬೇಕು

 

 

ಅಯ್ಯಾ, ನಿಮ್ಮ ಶರಣರ ಸಂಗವೆನಗೆ ಪರಮಸುಖವಯ್ಯಾ,
ಅಯ್ಯಾ, ನಿಮ್ಮ ಶರಣರ ಅಗಲಿಕೆ
ಎನ್ನ ಪ್ರಾಣವಿಯೋಗವಯ್ಯಾ,
ಶಿವಶಿವಾ ಸಂತವಿಡುವೆನು, ಇನ್ನೆಂತಯ್ಯಾ
ಎನಗೇನು ಗತಿ, ಕೂಡಲಸಂಗಮದೇವಾ
ನಿಮ್ಮ ಶರಣರ ಮುನಿಸು ಎನಗೆ ಬಿಡಿಸಬಾರದ ತೊಡಕು

 

 

ಅಯ್ಯಾ, ನಿಮ್ಮ ಶರಣರ ಕಂಡ ಕಡು ಸುಖವನೇನೆಂಬೆನಯ್ಯಾ
ಅದು ಸಾಲೋಕ್ಯದಂತುಟಲ್ಲ, ಸಾಮೀಪ್ಯದಂತುಟಲ್ಲ,
ಸಾರೂಪ್ಯದಂತುಟಲ್ಲ, ಸಾಯುಜ್ಯದಂತುಟಲ್ಲ.
ಕೂಡಲಸಂಗಯ್ಯಾ, ನಿಮ್ಮ ಶರಣರ ಚರಣದ
ದರುಶನ ಸ್ಪರುಶನದಿಂದಾನು ಧನ್ಯನಾದೆನು.

 

 

ಅರಿದರಿದರಿದು !
ಸಮಗಾಣಿಸಬಾರದು, ತ್ರಾಸಿನ ಕಟ್ಟಳೆಯಂತಿನಿತು ವೆಗ್ಗಳವಾದಡೆ
ಈಶ್ವರನು ಒಡೆಯಿಕ್ಕದೆ ಮಾಣುವನೆ
ಪಾತ್ರ ಅಪಾತ್ರವೆಂದು ಕಂಡಡೆ ಶಿವನೆಂತು ಮೆಚ್ಚುವನು
ಜೀವ ಜೀವಾತ್ಮವ ಸರಿಯೆಂದು ಕಂಡಡೆ
ಸಮವೇದಿಸದಿಪ್ಪನೆ ಶಿವನು
ತನ್ನ ಮನದಲ್ಲಿ `ಯತ್ರ ಜೀವಃ ತತ್ರ ಶಿವನೆಂದು
ಸರ್ವಜೀವದಯಾಪಾರಿಯಾದಡೆ, ಕೂಡಲಸಂಗಮದೇವನು
ಕೈಲಾಸದಿಂದ ಬಂದು ಎತ್ತಿಕೊಳ್ಳದಿಪ್ಪನೆ

 

 

ಅನುದಿನದಲ್ಲಿ ಮಜ್ಜನಕ್ಕೆರೆದು ನೆನೆದು ಲಿಂಗ ಕರಿಗಟ್ಟಿತ್ತು.
ನೀರನೊಲ್ಲದು, ಬೋನವ ಬೇಡದು, ಕರೆದಡೆ ಓ ಎನ್ನದು.
ಸ್ಥಾವರ ಪೂಜೆ, ಜಂಗಮದ ಉದಾಸೀನ-
ಕೂಡಲಸಂಗಯ್ಯನೊಲ್ಲ ನೋಡಾ.

 

 

ಅರಸನ ಕಂಡು ತನ್ನ ಪುರುಷನ ಮರೆದಡೆ
ಮರನನೇರಿ ಕಯ್ಯ ಬಿಟ್ಟಂತಾುತ್ತಯ್ಯಾ.
ಇಹಲೋಕಕ್ಕೆ ದೂರ, ಪರಲೋಕಕ್ಕೆ ದೂರ !
ನಮ್ಮ ಕೂಡಲಸಂಗಮದೇವಯ್ಯ
ಜಂಗಮಮುಖ ಲಿಂಗವಾದ ಕಾರಣ.

 

 

ಅಯ್ಯಾ, ನಿಮ್ಮ ಮಹಾವ್ರತಿಗಳನಗಲಿ ಬದುಕಲಾರೆನು.
ಶಿವಧೋ ಶಿವಧೋ ! ಕಂಗಳಶ್ರುಗಳಲ್ಲಿ ಮುಂದುಗಾಣೆನು.
ಲಿಂಗಸಂಗಿಗಳನಗಲಿ ಆನೆಂತು ಬದುಕುವೆ,
ಕೂಡಲಸಂಗಮದೇವಾ.